ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ – ಫುಲೆ ಸಂಘ

ಶಿಕಾರಿಪುರ- ಜೂ.9 ಕೊವಿಡ್ ಮಹಾಮಾರಿಯ ಎರಡನೇ ಅಲೆಯು ಹಳ್ಳಿ ಹಳ್ಳಿಗೆ ಹರಡಿ ಇಂದು ದೊಡ್ಡಪ್ರಮಾಣದ ಜೀವ ಹಾನಿ ಮಾಡಿದೆ. ರಾಜ್ಯದ ನೂರಾರು ಶಿಕ್ಷಕರು ಬಲಿಯಾಗಿದ್ದಾರೆ,ಇದರಿಂದ ತಾಲ್ಲೂಕಿನ ಶಿಕ್ಷಕ ಶಿಕ್ಷಕಿಯರಿಗೆ ಆತಂಕ ಮೂಡಿದೆ.
ಈಗಾಗಲೇ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ಶೈಕ್ಷಣಿಕ ಅವದಿ ಪ್ರಕಟಿಸಿ ಶಾಲಾ ದಾಖಲಾತಿ ಪ್ರಾರಂಬಿಸಲು ಸೂಚಿಸಿದೆ. ಆದರಿಂದ ಕೊವಿಡ್ ಡ್ಯೂಟಿ ಮಾಡುವ ಶಿಕ್ಷಕರಿಗೆ ಮಾತ್ರವಲ್ಲದೇ ತಾಲ್ಲೂಕಿನ ಪ್ರತೀ ಶಿಕ್ಷಕ-ಶಿಕ್ಷಕಿಯರಿಗೂ ಅವರ ಆರೋಗ್ಯದ ಹಿತದೃಷ್ಟಿಯಿಂದ
ಮೊದಲ ಸಾಲಿನ ಆದ್ಯತೆ ನೀಡಿ ಕೋವಿಡ್ ಲಸಿಕೆ ಹಾಕಿಸಬೇಕು ಎಂದು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಿಕಾರಿಪುರ ತಾಲ್ಲೂಕಿನ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ಇಂದು ಮನವಿ ಸಲ್ಲಿಸಿದೆ.
ತಾಲೂಕಿನ ಎಲ್ಲಾ ಪದಾಧಿಕಾರಿಗಳ ಪರವಾಗಿ
ತಾಲ್ಲೂಕಿನ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮವ್ವ ಸುಣಗಾರ, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಉಷಾರಾಣಿ ಎಸ್ ವಿ,ತಾಲ್ಲೂಕು ಕೋಶಾಧ್ಯಕ್ಷರಾದ ಶ್ರೀಮತಿ ಅರುಣ ದೊಡ್ಡಮನಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಬ್ಯಾಡಗಿ ರವರು ಹಾಜರಿದ್ದರು.

Published by ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ

ರಾಜ್ಯದ ಸರ್ಕಾರಿ,ಅನುದಾನಿತ, ಪ್ರಾಥಮಿಕ, ಪದವೀಧರ, ಹಾಗೂ ಪ್ರೌಢಶಾಲಾ ಶಿಕ್ಷಕಿಯರನ್ನೊಳಗೊಂಡ ಏಕೈಕ‌ ಸಂಘ

Leave a comment