ಶಿಶುಪಾಲನೆ ರಜೆಗೆ ಮೂಲ ಕಾರಣರಾದ IAS ಅಧಿಕಾರಿಯನ್ನು ಗೌರವಿಸಿ ಸನ್ಮಾನಿಸಿದ ರಾಜ್ಯ ಫುಲೆ ಸಂಘ

ಕಲ್ಬುರ್ಗಿ June-23.
ರಾಜ್ಯದ ಸಮಸ್ತ ಸರ್ಕಾರಿ ಮಹಿಳಾ ಸಿಬ್ಬಂದಿಗಳಿಗೆ ತಮ್ಮ ಸೇವಾವಧಿಯಲ್ಲಿ ಒಟ್ಟು 180 ದಿನಗಳ ಶಿಶುಪಾಲನೆ ರಜೆಗಳನ್ನು ಘೋಷಣೆ ಮಾಡಿ ಘನ ಸರ್ಕಾರವು ಆದೇಶ ಮಾಡಿರುತ್ತದೆ.ರಾಜ್ಯದ ಎಲ್ಲಾ ಸರ್ಕಾರಿ,ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕಿಯರನ್ನು ಒಳಗೊಂಡ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಸರ್ಕಾರದ ಈ ಆದೇಶವನ್ನು ಸಂತಸದಿಂದ ಸ್ವಾಗತಿಸಿದೆ.ಹಾಗೂ ಘನ ಸರ್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸಿದೆ.

ನಲಿನ್ ಅತುಲ್.IAS. ಅಪರ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ.ಕಲ್ಬುರ್ಗಿ ವಿಭಾಗ


ಮಕ್ಕಳಿಗೆ ಮಾತೃ ವಾತ್ಸಲ್ಯದ ಪ್ರೀತಿ ಮಮಕಾರದ ಅಮ್ಮನ ತೋಳಿನ ಆರೈಕೆ ಅಗತ್ಯವಾಗಿ ಬೇಕಾಗಿತ್ತು. ಇದು ಅತೀ ಮುಖ್ಯವಾಗಿ ಎಲ್ಲಾ ಮಹಿಳಾ ಸಿಬ್ಬಂದಿಗಳಿಗೆ ಅನಿವಾರ್ಯವಾಗಿತ್ತು.ಇದು ರಾಜ್ಯದ ಎಲ್ಲಾ ಮಹಿಳಾ ನೌಕರರಿಗೆ ಸಂತಸ ತಂದಿದೆ. ಕಳೆದ ವರ್ಷದ ಡಿಸೆಂಬರ್ ನಲ್ಲಿ ಕಲ್ಬುರ್ಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಶ್ರೀ ನಲಿನ್ ಅತುಲ್ ರವರು ಈ ಶಿಶುಪಾಲನೆ ರಜೆ ಕೋರಿ ಘನ ಸರ್ಕಾರಕ್ಕೆ ಐದು ಪುಟಗಳ ಸಮಗ್ರ ಪ್ರಸ್ಥಾವನೆಯನ್ನು ಸಲ್ಲಿಸಿ ಗಮನ ಸೆಳೆದಿದ್ದರು.ಈ ಆದೇಶದ ಮೂಲ‌ ಕಾರಣ ಅವರೇ ಆಗಿದ್ದಾರೆ ಎಂದು ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ. ಎಸ್.ಮುಳ್ಳೂರ ರವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ಕಲ್ಬುರ್ಗಿ ಜಿಲ್ಲಾ ಘಟಕವು ಅವರಿಗೆ ಇಂದು ಸನ್ಮಾನಿಸಿ ಗೌರವಿಸಿದೆ.
ಈ ಸಂದರ್ಭದಲ್ಲಿ, ಹಿರಿಯ ಸಹಾಯಕ ನಿರ್ದೇಶಕರಾದ ಶ್ರೀ ಚನ್ನಬಸಪ್ಪ ಮುಧೋಳ ಸರ್ ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀಮತಿ ಸೇವಂತ ಚೌಹಾಣ್,ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಸಾವಿತ್ರಿ ಪಾಟೀಲ್ ಹಾಗೂ ಪದಾಧಿಕಾರಿಗಳಾದ ಗಂಗಮ್ಮ ನಾಲ್ವರ್, ರೇಣುಕಾ ಎನ್, ವಿಶಾಲಾಕ್ಷಿ, ರಾಜೇಶ್ವರಿ, ವಿಜಯಲಕ್ಷ್ಮಿ ಹಿರೇಮಠ್, ಮಲ್ಲಮ್ಮ, ಯಶೋಧ ಉಪಸ್ಥಿತರಿದ್ದರು.

Published by ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ

ರಾಜ್ಯದ ಸರ್ಕಾರಿ,ಅನುದಾನಿತ, ಪ್ರಾಥಮಿಕ, ಪದವೀಧರ, ಹಾಗೂ ಪ್ರೌಢಶಾಲಾ ಶಿಕ್ಷಕಿಯರನ್ನೊಳಗೊಂಡ ಏಕೈಕ‌ ಸಂಘ

Leave a comment