ನಿವೃತ್ತಿ ಶಿಕ್ಷಕರಿಗೆ ಗೌರವದಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ದಿನಾಂಕ:-27/11/2021 ರಂದು ಮಂಡಘಟ್ಟ ಕ್ಲಸ್ಟರಿನ ಸ.ಕಿ.ಪ್ರಾ.ಸೂಡೂರು ಶಾಲೆಯಲ್ಲಿನಿವೃತ್ತಿ ಹೊಂದಿದ್ದ ಶ್ರೀ ವಿರೂಪಾಕ್ಷಪ್ಪ ಸರ್ ಅವರನ್ನು ನಮ್ಮ ಶಿವಮೊಗ್ಗ ಜಿಲ್ಲಾ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀಮತಿ ರಾಧಾ ಅವರು ಜಿಲ್ಲಾ ಸಹಕಾರ್ಯದರ್ಶಿಯಾದ ಶ್ರೀಮತಿ ಸುಮಂಗಲಾ ನಾಯ್ಕ ಅವರು ಶಿವಮೊಗ್ಗ ತಾಲ್ಲೂಕು ಸಂಘದ ಅಧ್ಯಕ್ಷರಾದ ಶ್ರೀಮತಿ ಶಾಹಿನಬಾನು ಹಾಗೂ ಗೌರವಾಧ್ಯಕ್ಷರಾದ ಲಕ್ಷ್ಮೀಯವರು ಸೇರಿ ಸನ್ಮಾನಿಸಿದರು.


ಶ್ರೀ ವಿರೂಪಾಕ್ಷಪ್ಪ ಸರ್ ರವರು ಸೂಡೂರು ಸ. ಕಿ.ಪ್ರಾ.ಶಾಲೆಯಲ್ಲಿ ಸುಮಾರು 20 ವರ್ಷಗಳಕಾಲ ಸುದೀರ್ಘ ಸೇವೆ ಸಲ್ಲಿಸಿ ಈಗ ವಯೋ ನಿವೃತ್ತಿ ಹೊಂದಿದ್ದಾರೆ. ಇವರು ವೃತ್ತಿ ಜೀವನದಲ್ಲಿಯಾವಾಗಲೂ ಹಸನ್ಮುಖಿಯಾಗಿದ್ದು ಒಳ್ಳೆತನದಿಂದ ಕ್ಲಸ್ಟರಿನ ಎಲ್ಲಾ ಶಿಕ್ಷಕರ, ವಿದ್ಯಾರ್ಥಿಗಳ ,ಪೋಷಕರ,ಊರಿನವರ ಮೆಚ್ಚುಗೆಗೆ ಪಾತ್ರರಾಗಿದ್ದರು.ವಿರೂಪಾಕ್ಷಪ್ಪ ಶಿಕ್ಷಕರ ಸಂಘದಲ್ಲಿ ಗುರುತಿಸಿ ಕೊಂಡಿದ್ದರು.


ಕ್ಲಸ್ಟರಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಮುಂದಾಳತ್ವ ವಹಿಸಿ ಕಿರಿಯರಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು ಇವರ ಬಗ್ಗೆ ಸಹೋದ್ಯೋಗಿ ಶಿಕ್ಷಕರು ಹಾಗೂ ಸಿ.ಆರ್.ಪಿ ಸದಾನಂದ ಅವರು ಮೆಚ್ಚುಗೆಯ ಮಾತುಗಳನ್ನಾಡಿದರು ವಿರೂಪಾಕ್ಷಪ್ಪ ಸರ್ ಅವರು ಹಲವಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದಾರೆ ಅವರ ನಿವೃತ್ತಿ ಜೀವನ ಸುಖ ಶಾಂತಿ ನೆಮ್ಮದಿಯಿಂದ ಕೂಡಿರಲಿ ಎಂದು ನಮ್ಮ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ ಶಿವಮೊಗ್ಗ ದಲ್ಲಿ ಸಮಾಜಮುಖಿ ಕೆಲಸ ಕಾರ್ಯದಲ್ಲಿ ತೊಡಗಿದೆ ಎಂದರು.ಸಹಕರಿಸಿದ ಎಲ್ಲರಿಗೂ ಜಿಲ್ಲಾ ಮತ್ತು ತಾಲ್ಲೂಕು ಸಾವಿತ್ರಿಬಾಯಿಪುಲೆ ಮಹಿಳಾ ಶಿಕ್ಷಕಿಯರ ಸಂಘದ ಪರವಾಗಿ ಶುಭಕೋರಲಾಗಿದೆ.

Published by ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ

ರಾಜ್ಯದ ಸರ್ಕಾರಿ,ಅನುದಾನಿತ, ಪ್ರಾಥಮಿಕ, ಪದವೀಧರ, ಹಾಗೂ ಪ್ರೌಢಶಾಲಾ ಶಿಕ್ಷಕಿಯರನ್ನೊಳಗೊಂಡ ಏಕೈಕ‌ ಸಂಘ

Leave a comment