ಗುಬ್ಬಿ: ದಿನಾಂಕ 19 ಮಾರ್ಚ್ 2022

ಕರ್ನಾಟಕ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ (ರಿ) ತಾಲ್ಲೂಕು ಘಟಕ-ಗುಬ್ಬಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆ ಗುಬ್ಬಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಗುಬ್ಬಿಶಾಖೆ, ಲಯನ್ಸ್ ಕ್ಲಬ್ ಗುಬ್ಬಿ, ಸುಧೆ ಸೇವಾ ಟ್ರಸ್ಟ್(ರಿ) ತುಮಕೂರು, ಶ್ರೀ ಗುರುರಾಘವೇಂದ್ರ ಚಾರಿಟಬಲ್ ಟ್ರಸ್ಟ್ (ರಿ) ಗುಬ್ಬಿ, ಈ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸೇವಾ ತೃಪ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.



ಕರ್ನಾಟಕ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘದ ಗುಬ್ಬಿ ಘಟಕದ ಕಾರ್ಯದರ್ಶಿಗಳಾದ ಶ್ರೀಮತಿ ಅನಿತ ವಿ ಎಸ್ ಅವರು ಎಲ್ಲರನ್ನೂ ಕಾರ್ಯಕ್ರಮಕ್ಕೆ ಸ್ವಾಗತಿಸಿದರು.
ಎಲ್ಲಾ ಗಣ್ಯರು ದೀಪವನ್ನು ಬೆಳಗಿಸಿ ಸಾವಿತ್ರಿಬಾಯಿ ಪುಲೆಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮವು ನಾಡಗೀತೆ ಮತ್ತು ರೈತ ಗೀತೆಯೊಂದಿಗೆ ಪ್ರಾರಂಭವಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದಂತಹ ಸಾಧಕಿಯರನ್ನು ಗುರುತಿಸಿ ಸನ್ಮಾನಿಸಲಾಯಿತು. ಸ್ಪರ್ಧೆಗಳಲ್ಲಿ ಗೆದ್ದವರಿಗೆ ಗಣ್ಯರಿಂದ ಬಹುಮಾನವನ್ನು ವಿತರಿಸಲಾಯಿತು.


ಸಮಾರಂಭದಲ್ಲಿ ಗುಬ್ಬಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಸೋಮಶೇಖರ್ ಸರ್ ಅವರು, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಯುತ ಸಿದ್ದಲಿಂಗಸ್ವಾಮಿಯವರು, ಅಕ್ಷರ ದಾಸೋಹ ನಿರ್ದೇಶಕರಾದ ಶ್ರೀಯುತ ಯೋಗಾನಂದ ಸರ್ ರವರು, ಕರ್ನಾಟಕ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ ಗುಬ್ಬಿ ಘಟಕದ ಅಧ್ಯಕ್ಷರಾದ ಶ್ರೀಮತಿ ಎಸ್ ವಿ ಲಕ್ಷ್ಮಿ ರವರು, ಚಿಕ್ಕನಾಯಕನಹಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿ ಯಶೋಧ ರವರು, ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ಡಾಕ್ಟರ್ ಮಲ್ಲಪ್ಪ ಬಂಡಿಯವರು, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆ ಗುಬ್ಬಿ ಇದರ ಅಧ್ಯಕ್ಷರಾದ ಶ್ರೀಯುತ ಜಿ ಆರ್ ಶಿವಕುಮಾರ್ ಅವರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಗುಬ್ಬಿ ಶಾಖೆಯ ಕಾರ್ಯದರ್ಶಿಯವರಾದ ಶ್ರೀಯುತ ಕಮಲನಾಭ ಚಾರ್ಯರು, ಸುಧಾ ಸೇವಾ ಕಲೆ ಸಾಹಿತ್ಯ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಟ್ರಸ್ಟ್ ತುಮಕೂರು ಇದರ ಅಧ್ಯಕ್ಷರಾದ ಸುಧಾ ರಾಜುರವರು, ಶ್ರೀ ಗುರುರಾಘವೇಂದ್ರ ಚಾರಿಟಬಲ್ ಟ್ರಸ್ಟ್ ಗುಬ್ಬಿ ಇದರ ಅಧ್ಯಕ್ಷರಾದ ಶ್ರೀಯುತ ರಂಗನಾಥ್ ರವರು, ಪುಟ್ಟಣ್ಣನವರು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಉಮೇಶ್ ರವರು, ಭಾರತ್ ಗೌಡ್ಸ್ ಅಂಡ್ ಗೈಡ್ಸ್ ಕಾರ್ಯದರ್ಶಿಯವರಾದ ರಂಗಪ್ಪನವರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಶ್ರೀಯುತ ಅರುಣ್ ಕುಮಾರ್ ರವರು, ನಿರ್ದೇಶಕಿಯಾದ ಶ್ರೀಮತಿ ಯಶೋದಮ್ಮನವರು, ಕರ್ನಾಟಕ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾದ ಪ್ರವೀಣ ಕುಮಾರಿಯವರು, BRP ಗಳಾದ ಈಶ್ವರಪ್ಪನವರು, ಗಿರೀಶ ರವರು, ವಕೀಲರಾದ ಸದಾಶಿವಯ್ಯನವರು, ಶ್ರೀಯುತ ಅಣ್ಣಪ್ಪ ಸ್ವಾಮಿಯವರು ಪಟ್ಟಣ ಪಂಚಾಯತಿ ಅಧ್ಯಕ್ಷರು ಭಾಗವಹಿಸಿದ್ದರು, ಸಂಘದ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಿರುವ ನೆಚ್ಚಿನ ರಂಗಸ್ವಾಮಿ, ಸುರೇಶಯ್ಯ ಎಂ ಜಿ, ಹಾಗೂ ರವೀಶ್ ರವರು ಸಹಾ ಹಾಜರಿದ್ದರು, ಸಿಆರ್ಪಿ ಗಳಾದ ಚಿಕ್ಕವೀರಯ್ಯ ರವರು, ಶಿಕ್ಷಕರಾದ ಡಿಎಸ್ ಗಂಗಾಧರಯ್ಯ, ರೇಣುಕಾಪ್ರಸಾದ್ ರವರು, ಕರ್ನಾಟಕ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘದ ಗುಬ್ಬಿ ತಾಲೂಕಿನ ಎಲ್ಲಾ ಪದಾಧಿಕಾರಿಗಳು,
ಸದಸ್ಯರು ಹಾಗೂ ಜಿಲ್ಲಾ ಪ್ರತಿನಿಧಿಗಳು ಹಾಜರಿದ್ದರು.ಶ್ರೀಮತಿ ನಾಗರತ್ನಮ್ಮ ಮೇಡಂ ರವರು ಕಾರ್ಯಕ್ರಮಕ್ಕೆ ಹಾಜರಿದ್ದ ಎಲ್ಲರಿಗೂ ವಂದಿಸಿದರು. ಶ್ರೀಮತಿ ಲತಾಮಣಿ ಕೆ ಎಸ್ ರವರು ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು.
