ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡ
ಜಿಲ್ಲಾಘಟಕ- ವಿಜಯನಗರ,
ತಾಲ್ಲೂಕು ಘಟಕ- ಹರಪನಹಳ್ಳಿ


ಮಾ.28. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷರು.ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಲ್ಲ ಪದಾಧಿಕಾರಿಗಳು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಭೇಟಿಮಾಡಿ ಅಧಿಕೃತವಾಗಿ ನೂತನ ತಾಲ್ಲೂಕು ಘಟಕದ ಬಗ್ಗೆ ಮಾಹಿತಿ ನೀಡಿದರು. ರಾಜ್ಯಾದ್ಯಂತ ಹೆಮ್ಮರವಾಗಿ ಬೆಳೆದಿರುವ ಮಹಿಳಾ ಶಿಕ್ಷಕಿಯರ ಸಂಘಟನೆ ಇದಾಗಿದ್ದು ಇದರಲ್ಲಿ ರಾಜ್ಯದ ಸರ್ಕಾರಿ,ಅನುದಾನಿತ,ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕಿಯರು ಒಳಗೊಂಡಿದ್ದು,ರಾಜ್ಯ ಘಟಕದ ಅನುಮೋದನೆಯೊಂದಿಗೆ ನಾವೆಲ್ಲರೂ ತಾಲ್ಲೂಕು ಘಟಕ ರಚನೆ ಮಾಡಿಕೊಂಡಿರುತ್ತೇವೆ.ಇದರಡಿ ನಾವೆಲ್ಲರೂ ಹಲವಾರು ಶೈಕ್ಷಣಿಕ ಸೇವಾ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುವುದು. ತಾಲ್ಲೂಕು ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ನಮ್ಮ ಸಂಘದ ಸಹಕಾರ ಕೊಡಲು ನಾವು ಸದಾ ಸಿದ್ದರಿರುತ್ತೇವೆ,ಯಾವುದೇ ಕಾರ್ಯಾಗಾರ ಆಯೋಜಿಸಲು ನಮ್ಮನ್ನು ಸಹಾ ಪರಿಗಣಿಸಿ ಅವಕಾಶ ಕಲ್ಪಿಸಿಕೊಡಬೇಕೆಂದು ವಿನಂತಿಸಲಾಯಿತು. ಸಕಾರಾತ್ಮಕವಾಗಿ ಸ್ಪಂದಿಸಿರುವ ಮಾನ್ಯ ಶಿಕ್ಷಣಾಧಿಕಾರಿಗಳು ಸಂಘಟನೆ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿ ನಮ್ಮ ಸಂಪೂರ್ಣ ಬೆಂಬಲ ಪ್ರೋತ್ಸಾಹ ನೀಡುವುದಾಗಿ ತಿಳಿಸಿದ್ದಾರೆ, ಮಾನ್ಯರಿಗೆ ಸಂಘಟನ ಪರವಾಗಿ ಅನಂತ ಧನ್ಯವಾದಗಳನ್ನು ತಿಳಿಸಿದ್ದಾರೆ. ಹಾಗೆಯೇ ಇಂದು ಭಾಗವಹಿಸಿದ್ದ ತಾಲ್ಲೂಕಿನ ಎಲ್ಲಾ ಪದಾಧಿಕಾರಿಗಳಿಗೂ ಸಹಾ ಧನ್ಯವಾದಗಳನ್ನು ಸಲ್ಲಿಸಲಾಗಿದೆ.
ನಮ್ಮ ಸಂಘ ನಮ್ಮ ಹೆಮ್ಮೆ ನಮ್ಮಸ್ವಾಭಿಮಾನ


