ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆ ಅವರ 193 ನೇ ಜಯಂತಿ ಆಚರಣೆ ಮತ್ತು ಸಾಧಕರಿಗೆ ಸನ್ಮಾನ

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ). ರಾಜ್ಯ ಘಟಕ – ಧಾರವಾಡ, ಜಿಲ್ಲಾ ಘಟಕ – ತುಮಕೂರು, ತಾಲ್ಲೂಕು ಘಟಕ – ಗುಬ್ಬಿ..

ಗುಬ್ಬಿ: ದಿನಾಂಕ 26 ಜನವರಿ 2023ರ ಗುರುವಾರದಂದು ಗುಬ್ಬಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಭಾರತದ ಮೊದಲ ಶಿಕ್ಷಕಿ, ಕ್ರಾಂತಿಜ್ಯೋತಿ, ಅಕ್ಷರದವ್ವ, ಮಾತೆ ಸಾವಿತ್ರಿಬಾಯಿ ಫುಲೆ ಅವರ 193ನೇ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗುಬ್ಬಿ ಶಾಖೆಯ ವ್ಯವಸ್ಥಾಪಕರು, ಒತ್ತಡದ ಕೆಲಸದ ನಡುವೆಯೂ ಸದಾ ಹಸನ್ಮುಖಿಗಳಾಗಿ ಸಾರ್ವಜನಿಕರ ಸೇವೆ ಮಾಡುತ್ತಿರುವ ಶ್ರೀಮತಿ ಸುಮಾ ಮೇಡಂ ರವರನ್ನು ಮತ್ತು ಸ್ವಚ್ಚತಾ ಕಾರ್ಯದಲ್ಲಿ ತೊಡಗಿರುವ ಶ್ರೀಮತಿ ಯಶೋದಾ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀಮತಿ ಸುಮಾ ಮೇಡಂ ಅವರು ಸಂಘದ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು ಮತ್ತು ಸದಾ ಸಂಘದ ಜೊತೆಗಿರುವುದಾಗಿ ತಿಳಿಸಿದರು.
ಗುಬ್ಬಿ ಘಟಕದ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮೀ ಎಸ್ ವಿ ಅವರು ಪ್ರಾಸ್ತಾವಿಕ ನುಡಿಗಳಲ್ಲಿ ಮಾತೆಯ ಬಗ್ಗೆ, ಅವರ ಆದರ್ಶಗಳ ಬಗ್ಗೆ ಮತ್ತು ರಾಜ್ಯ ಘಟಕ, ಜಿಲ್ಲಾ ಘಟಕ ಮತ್ತು ತಾಲ್ಲೂಕು ಘಟಕದ ಕಾರ್ಯ ಚಟುವಟಿಕೆಗಳನ್ನು ವಿವರಿಸಿದರು.ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಅನಿತ.ವಿ.ಎಸ್. ರವರು ಮಾತೆಯನ್ನು ಆರಾಧಿಸುವ,ಪೂಜಿಸುವ ಜೊತೆ ಜೊತೆಯಾಗಿ ನಾವೆಲ್ಲರು ಮಾತೆಯ ಅನುಯಾಯಿಗಳಾಗಬೇಕು ಅವರ ಆದರ್ಶಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಗುಬ್ಬಿ ಘಟಕದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಕೋಶಾಧ್ಯಕ್ಷರು ಮತ್ತು ತಾಲ್ಲೂಕಿನ ಸಮಸ್ತ ಪದಾಧಿಕಾರಿಗಳು, ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಿದರು.

Published by ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ

ರಾಜ್ಯದ ಸರ್ಕಾರಿ,ಅನುದಾನಿತ, ಪ್ರಾಥಮಿಕ, ಪದವೀಧರ, ಹಾಗೂ ಪ್ರೌಢಶಾಲಾ ಶಿಕ್ಷಕಿಯರನ್ನೊಳಗೊಂಡ ಏಕೈಕ‌ ಸಂಘ

Leave a comment