ವೀರವನಿತೆ ಒನಕೆ ಓಬವ್ವರಂತೆ ಸಮಯ ಪ್ರಜ್ಞೆ ಹಾಗೂ ಧೈರ್ಯ ಮನೋಭಾವವನ್ನು ರೂಢಿಸಿಕೊಳ್ಳಿ- ಡಾ.ಪ್ರತಿಭಾ,ಆರ್

ನ.11 ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ತಹಶಿಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಅವರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಜ್ಯೋತಿ ಬೆಳಗಿಸುವುದರ ಮೂಲಕ ವೀರ ವನಿತೆ ಓಬವ್ವನ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ, ಕಾಪು ತಾಲ್ಲೂಕು ತಹಶಿಲ್ದಾರ್ ಡಾ.ಪ್ರತಿಭಾ ಆರ್ ರವರು ವೀರವನಿತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ನಂತರ ಮಾತನಾಡಿದ ಅವರು ವೀರವನಿತೆ ಒನಕೆ ಓಬವ್ವ ಅವರ ಧೈರ್ಯ-ಸ್ಥೈರ್ಯ ಗಳನ್ನು ಶ್ಲಾಘಿಸಿದರು. ಆಕೆ ತನ್ನ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದ ಒಂದು ಸಾಮ್ರಾಜ್ಯದ ಉಳಿವಿಗೆ ಕಾರಣಳಾದಳು. ನಮ್ಮ ಹೆಣ್ಣುಮಕ್ಕಳು ಕೂಡಾ ಆಕೆಯಂತೆ ಸಮಯ ಪ್ರಜ್ಞೆ ಮತ್ತು ಧೈರ್ಯ ವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಡೆಪ್ಯುಟಿ ತಹಶಿಲ್ದಾರ್ ಅಶೋಕ್ ಎನ್ ಕೋಟೆಕಾರ್ ಹಾಗೂ ಇತರ ಸಿಬ್ಬಂದಿ ವರ್ಗದವರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Published by ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ

ರಾಜ್ಯದ ಸರ್ಕಾರಿ,ಅನುದಾನಿತ, ಪ್ರಾಥಮಿಕ, ಪದವೀಧರ, ಹಾಗೂ ಪ್ರೌಢಶಾಲಾ ಶಿಕ್ಷಕಿಯರನ್ನೊಳಗೊಂಡ ಏಕೈಕ‌ ಸಂಘ

Leave a comment