

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ಧಾರವಾಡ. ಮಧುಗಿರಿ ಜಿಲ್ಲಾ ಘಟಕ ವತಿಯಿಂದ ಇಂದು ನಡೆದ ಜಿಲ್ಲಾ ಘಟಕದ ಜಿಲ್ಲಾಮಟ್ಟದ ಸಾವಿತ್ರಿಬಾಯಿ ಪುಲೆ ಜನ್ಮದಿನೋತ್ಸವ ಹಾಗೂ ಶೈಕ್ಷಣಿಕ ಕಾರ್ಯಗಾರವು ಇಂದು ಶಿರಾ ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿತು. ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷರಾದಂತಹ ಶ್ರೀಮತಿ ರಾಧಮ್ಮನವರು ಅಧ್ಯಕ್ಷತೆ ವಹಿಸಿದ್ದರು.ಡಾ/ ಶ್ರೀ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ನೂರುನ್ನೀಸರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೌರವಾನ್ವಿತ ಅತಿಥಿಗಳಾದಂತಹ ಶಿರಾ ತಾಲೂಕಿನ ಹಿರಿಯ ನ್ಯಾಯಾಧೀಶರಾದ ಗೀತಾಂಜಲಿ ಮೇಡಂ ರವರು DYPC ಶ್ರೀಮತಿ ಪುಷ್ಪವಲ್ಲಿ ಮೇಡಂ ರವರು, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸನ್ಮಾನ್ಯ ಕೃಷ್ಣಪ್ಪ ಸರ್ ಅ ವರು, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಯಾದ ಟಿ.ಡಿ ನರಸಿಂಹಮೂರ್ತಿ, ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಲತಾಮಣಿ ಹೆಚ್ ಕೆ,ಶಿರಾ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಹನುಮಂತರಾಜು ಬಿ ಆರ್, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ನಾಲ್ಕು ತಾಲೂಕಿನ ಅಧ್ಯಕ್ಷರಾದ ಕೊರಟಗೆರೆ ತಾಲೂಕಿನ ಸುಜಾತ ಜಿ ರವರು. ಮಧುಗಿರಿ ತಾಲೂಕಿನ ಮೀನಾಕ್ಷಮ್ಮ ಹಾಗೂ ಶಿರಾ ತಾಲೂಕಿನ ಪದ್ಮಕ್ಕ ಪಾವಗಡ ತಾಲೂಕಿನ ದುರ್ಗಮ್ಮ ಅಧ್ಯಕ್ಷರು ಹಾಜರಿದ್ದರು ತಾಲ್ಲೂಕು ಘಟಕದಅಧ್ಯಕ್ಷರು , ಕಾರ್ಯದರ್ಶಿಗಳು, ಕೋಶಾಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು, ಶಿರಾ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಹಿಳಾ ಪದಾಧಿಕಾರಿಗಳು ಹಾಜರಿದ್ದರು. ನ್ಯಾಯಾಧೀಶರಾದಂತಹ ಗೀತಾಂಜಲಿ ಮೇಡಂ ಅವರು ಕಾನೂನಿನ ಅರಿವು ಮೂಡಿಸಿದರು. ತುಮಕೂರಿನ ಹಿರಿಯ ನ್ಯಾಯಾಧೀಶರಾದ ನೂರು ನ್ನೀಸಾ ಮೇಡಂ ರವರು ಶಿಕ್ಷಕಿಯರಿಗೆ ಮಕ್ಕಳಿಗೆ ಅಪ್ರಾಪ್ತ ವಯಸ್ಸಿನಲ್ಲಿ ಆಗುವಂತಹ ತೊಂದರೆಗಳು ಹಾಗೂ ಅದರ ಪರಿಣಾಮಗಳ ಬಗ್ಗೆ ವಿವರವಾಗಿ ತಿಳಿಸಿದರು. ಹಾಗೆ ಶಿಕ್ಷಕರು ಯಾವ ರೀತಿ ಮಕ್ಕಳ ವಿಷಯದಲ್ಲಿ ಕ್ರಮ ಕೈಗೊಳ್ಳಬೇಕೆಂಬುದರ ಬಗ್ಗೆಯೂ ತಿಳಿಸಿದರು. ಡಾ/ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿರವರು ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಹೆಚ್ಚಿಸುವ ಕುರಿತು ತಿಳಿಸಿದರು, ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವಂತಹ ತೊಂದರೆಗಳು ಹಾಗೂ ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಜವಾಬ್ದಾರಿ ತಿಳಿಸಿದರು .





