ಮಾತೆ ಸಾವಿತ್ರಿಬಾಯಿ ಪುಲೆ ಜನ್ಮದಿನಾಚರಣೆಯನ್ನು ವೃದ್ದಾಶ್ರಮದಲ್ಲಿ ಆಚರಿಸಿ ರಾಜ್ಯಕ್ಕೆ ಮಾದರಿಯಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ಚಾಮರಾಜನಗರ.ಜ.28.ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್(ರಿ) ನವದೆಹಲಿ
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)
ರಾಜ್ಯ ಘಟ್ಟಕ – ಧಾರವಾಡ
ಜಿಲ್ಲಾ ಹಾಗೂ ತಾಲೂಕು ಘಟಕ ಚಾಮರಾಜನಗರದ ವತಿಯಿಂದ ಮಾತೆ ಸಾವಿತ್ರಿಬಾಯಿ ಫುಲೆರವರ ಜನ್ಮ ದಿನಾಚರಣೆಯ ಅಂಗವಾಗಿ ದಿನಾಂಕ 27.01. 2024 ರಂದು ಆಶ್ರಯ ಸೇವಾ ಚಾರಿಟಬಲ್ ಟ್ರಸ್ಟನ ವೃದ್ಧಾಶ್ರಮದಲ್ಲಿ ಉಪನ್ಯಾಸ ಹಾಗೂ ವೃದ್ಧಾಶ್ರಮಕ್ಕೆ ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಘದ ವತಿಯಿಂದ ವೃದ್ಧಾಶ್ರಮಕ್ಕೆ ಊಟದ ವ್ಯವಸ್ಥೆಯನ್ನು ಮಾಡಿ, ಬ್ಲೂಟೂತ್ ಧ್ವನಿವರ್ಧಕವನ್ನು ಕೊಡುಗೆಯಾಗಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಚಾಮರಾಜನಗರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದಂತ ಡಿ ಸೋಮಣ್ಣೇಗೌಡ ರವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀಮತಿ ಭವಾನಿದೇವಿ ಸಿ. ಎನ್. ರವರು ವಹಿಸಿದ್ದರು. ಪ್ರಾಸ್ತಾವಿಕ ನುಡಿಗಳನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಸುಶೀಲ ಸಿ.ಎಂ.ರವರು ನೆರವೇರಿಸಿ ಕೊಟ್ಟರು. ಸ್ವಾಗತ ಕಾರ್ಯಕ್ರಮವನ್ನು ತಾಲೂಕು ಅಧ್ಯಕ್ಷರಾದ ಶ್ರೀಮತಿ ನೇತ್ರಾವತಿ .ಎಸ್. ನಡೆಸಿಕೊಟ್ಟರು. ನಂಜನಗೂಡು ತಾಲೂಕು ಕೋಶಾಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಪಿ ರವರು ಮಾತೆ ಸಾವಿತ್ರಿಬಾಯಿ ಫುಲ್ಲರವರ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಶ್ರೀಮತಿ ಪ್ರೇಮ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಮಂಗಳಮ್ಮ ರವರು ವಂದನಾರ್ಪಣೆ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ವೈ.ಎಸ್. ಮಹದೇವಯ್ಯನವರು ಆಶ್ರಯ ಸೇವಾ ಚಾರಿಟೇಬಲ್ ಟ್ರಸ್ಟ್ ನ ವ್ಯವಸ್ಥಾಪಕರಾದ ಶ್ರೀಯುತ ರಮೇಶ್ ರವರು, ಸಂಘದ ಕಾರ್ಯದರ್ಶಿಗಳಾದ ಶ್ರೀಮತಿ ಶ್ಯಾಮ ಸುಂದರಿ ರವರು ಕೋಶ ಅಧ್ಯಕ್ಷರಾದ ಶ್ರೀಮತಿ ಶಿವರುದ್ರಮ್ಮನವರು,ಸಾವಿತ್ರಿಬಾಯಿ ಫುಲೆ ಸಂಘದ ಸರ್ವ ಸದಸ್ಯರು
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಹಾಗೂ ತಾಲೂಕು ಘಟಕದ ಅಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸರ್ವ ಪದಾಧಿಕಾರಿಗಳು ಶಿಕ್ಷಕ ಶಿಕ್ಷಕಿ ಬಂಧುಗಳು ಹಾಗೂ ಆಶ್ರಮದ ಫಲಾನುಭವಿಗಳು ಹಾಜರಿದ್ದರು.

Published by ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ

ರಾಜ್ಯದ ಸರ್ಕಾರಿ,ಅನುದಾನಿತ, ಪ್ರಾಥಮಿಕ, ಪದವೀಧರ, ಹಾಗೂ ಪ್ರೌಢಶಾಲಾ ಶಿಕ್ಷಕಿಯರನ್ನೊಳಗೊಂಡ ಏಕೈಕ‌ ಸಂಘ

Leave a comment