ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಡೆಸಿದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಯಶಸ್ವಿ

ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ ರಿ. ನವದೆಹಲಿ, ಕೇಂದ್ರ ಕಚೇರಿ ಧಾರವಾಡ.ಕರ್ನಾಟಕ

ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಿ.ರಾಜ್ಯಘಟಕ ಧಾರವಾಡ. ಜಿಲ್ಲಾ ಘಟಕ ತುಮಕೂರು

ತಾಲೂಕು ಘಟಕ ಗುಬ್ಬಿ

ಹಾಗೂ

ಚಾಲುಕ್ಯ ಆಸ್ಪತ್ರೆ ಗುಬ್ಬಿ, ಇವರ ಸಹಯೋಗದಲ್ಲಿ

ದಿನಾಂಕ 02/03/2024ರ ಶನಿವಾರದಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಬಾಬು ಜಗಜೀವನ್ ರಾಮ್ ಭವನ ಗುಬ್ಬಿ ಇಲ್ಲಿ ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ಡಾ. ಲತಾ ಎಸ್ ಮುಳ್ಳೂರ, ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರು ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ ನವದೆಹಲಿ ಮತ್ತು ರಾಜ್ಯಾಧ್ಯಕ್ಷರು, ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಿ. ರಾಜ್ಯಘಟಕ ಧಾರವಾಡ ಇವರು ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಲತಾ ಎಸ್ ಮುಳ್ಳೂರ ರವರು ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ ವೃತ್ತಿ ,ಸಂಘಟನೆ, ಕುಟುಂಬ ನಿರ್ವಹಣೆ ಎಲ್ಲದರಲ್ಲೂ ಮಹಿಳೆಯರು ಇಂದು ಮುಂದಿದ್ದಾರೆ ಸಮಸ್ಯೆಗಳು ಬಂದಾಗ ಮಹಿಳೆಯರು ದಿಟ್ಟವಾಗಿ ಎದುರಿಸಿ ನಿಲ್ಲಬೇಕು ಎಂದರು. ಜೊತೆಗೆ ಜನವರಿ 3 ನೇ ತಾರೀಖು ಮಾತೆ ಸಾವಿತ್ರಿಬಾಯಿ ಪುಲೆ ಅವರ ಜಯಂತಿ ಪ್ರಯುಕ್ತ ಶಿಕ್ಷಕಿಯರ ದಿನವನ್ನಾಗಿ ಆಚರಣೆ ಮಾಡಲು ಆದೇಶ ಮಾಡಬೇಕೆಂದು ಈ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು. ಶೈಕ್ಷಣಿಕವಾಗಿ ಸಾಮಾಜಿಕವಾಗಿ ಇಂದು ನಮ್ಮ ಸಂಘ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಸತತ ಐದು ಬಾರಿ ಗೆಲವು ಪಡೆದಿರುವ, ಗುಬ್ಬಿ ಶಾಸಕರಾಗಿರುವ ಶ್ರೀ ಶ್ರೀನಿವಾಸ್ ರವರ ಧರ್ಮಪತ್ನಿ ಶ್ರೀಮತಿ ಭಾರತಿ ಶ್ರೀನಿವಾಸ್ ರವರು ಉಚಿತ ಆರೋಗ್ಯ ತಪಾಸಣೆಯನ್ನು ಡಾ.ಲತಾ ಎಸ್.ಮುಳ್ಳೂರ ರವರ ಹೃದಯ ಬಡಿತ ತಪಾಸಣೆ ಮಾಡುವ ಮೂಲಕ ಉದ್ಘಾಟಿಸಿದರು

ಶ್ರೀಯುತ ಶ್ರೀನಿವಾಸ್ ರವರು ಶಾಸಕರು ಗುಬ್ಬಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿ ಅಧ್ಯಕ್ಷರು ಇವರ ಧರ್ಮಪತ್ನಿಯವರಾದಂತಹ ಶ್ರೀಮತಿ ಭಾರತಿ ಶ್ರೀನಿವಾಸ್ ರವರು ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಮಹಿಳೆಯರು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದಾಗ ಮಹಿಳಾ ಸಬಲೀಕರಣ ಸಾಧ್ಯ ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಮಹಿಳೆಯರ ಕಾರ್ಯಾಗಾರಗಳಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಮಾತೆ ಸಾವಿತ್ರಿಬಾಯಿ ಪುಲೆ ಅವರ ಭಾವಚಿತ್ರ ಅನಾವರಣ ಹಾಗೂ ಕಲಾಕೃತಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಡಾ.ಮಹಾಲಕ್ಷ್ಮಿ, ಪ್ರಸೂತಿ ತಜ್ಞರು, ಚಾಲುಕ್ಯ ಆಸ್ಪತ್ರೆ ಗುಬ್ಬಿ ಇವರು ಅಧಿಕೃತ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಲಕ್ಷ್ಮಿ ಎಸ್ ವಿ ತಾಲೂಕು ಅಧ್ಯಕ್ಷರು ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ತಾಲೂಕು ಘಟಕ ಗುಬ್ಬಿ ಇವರು ವಹಿಸಿಕೊಂಡಿದ್ದರು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಶ್ರೀಯುತ ಯತೀಶ್ ರವರು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶ್ರೀಯುತ ಜಗದೀಶ್ ರವರು, ಡಾ.ಲತಾ ಎಸ್ ಮುಳ್ಳೂರ ರವರ ಆಪ್ತ ಕಾರ್ಯದರ್ಶಿಗಳಾದ ಶ್ರೀಮತಿ ಅನಿತಾ ಮತ್ತು ಶ್ರೀಮತಿ ಸೂರ್ಯಕಲಾ ರವರು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ಉಮೇಶ್ ರವರು, ಕರ್ನಾಟಕ ಸಾವಿತ್ರಿಬಾಯಿ ಫುಲೆ ಸಂಘದ ಗುಬ್ಬಿ ಘಟಕದ ಗೌರವಾಧ್ಯಕ್ಷರಾದ ಶ್ರೀಮತಿ ಸುಭಾಷಿಣಿ, ಕಾರ್ಯದರ್ಶಿ ಶ್ರೀಮತಿ ವಿಶಾಲಾಕ್ಷಿ, ಖಜಾಂಚಿ ಮಂಜಮ್ಮ, ಹಿರಿಯ ಸಲಹೆಗಾರರಾದ ಶ್ರೀಮತಿ ವಿಜಯಮ್ಮ, ತುಮಕೂರು ತಾಲ್ಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿ ಸಿದ್ದಮ್ಮನವರು, ಜಿಲ್ಲಾ ಕಾರ್ಯದರ್ಶಿ ಶೋಭರವರು, ತಿಪಟೂರು ಅಧ್ಯಕ್ಷರಾದ ಶ್ರೀಮತಿ ವನಿತಾ ರವರು,ಕುಣಿಗಲ್ ಅಧ್ಯಕ್ಷರಾದ ಶ್ರೀಮತಿ ಗೀತಾಂಜಲಿಯವರು, ಸಂಘದ ಪ್ರೋತ್ಸಾಹಕರಾದ ಶ್ರೀ ಸುರೇಶಯ್ಯ ಎಂ ಜಿ, ಶ್ರೀ ರಂಗಸ್ವಾಮಿ, ಶ್ರೀ ರವೀಶ್, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಉಷಾ,ಶ್ರೀಮತಿ ನಾಗರತ್ನಾ, ಶ್ರೀಮತಿ ಭವ್ಯ,
ವಿವಿಧ ಸಂಘಗಳ ನಿರ್ದೇಶಕರಾದಂತ ಶ್ರೀ ಶಶಿಧರ್, ಶ್ರೀ ಸಿದ್ದಲಿಂಗೇಗೌಡ, ಶ್ರೀ ಅರುಣ್ ಕುಮಾರ್, ಶ್ರೀಮತಿ ಎನ್.ಟಿ ಲಕ್ಷ್ಮಿ, ಶ್ರೀ ಪಿ ಆರ್ ಚನ್ನಬಸಪ್ಪ, ಶ್ರೀ ಜಗದೀಶ್, ಶ್ರೀ ಶ್ರೀನಿವಾಸ್ ಹಾಗೂ ಗುಬ್ಬಿ ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳು, ಬಿ ಆರ್ ಪಿ ಗಳು, ಬಿ ಐ ಆರ್ ಟಿ, ಸಿ ಆರ್ ಪಿ ಗಳು ಹಾಜರಿದ್ದರು.

ಉಚಿತ ಆರೋಗ್ಯ ತಪಾಸಣೆ- ಚಾಲುಕ್ಯ ಆಸ್ಪತ್ರೆ ಸಿಬ್ಬಂದಿಗಳು

Published by ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ

ರಾಜ್ಯದ ಸರ್ಕಾರಿ,ಅನುದಾನಿತ, ಪ್ರಾಥಮಿಕ, ಪದವೀಧರ, ಹಾಗೂ ಪ್ರೌಢಶಾಲಾ ಶಿಕ್ಷಕಿಯರನ್ನೊಳಗೊಂಡ ಏಕೈಕ‌ ಸಂಘ

Leave a comment